ಕನ್ನಡದ ಅತ್ಯಂತ ಯಶಸ್ವಿ ಧಾರಾವಾಹಿಗಳಲ್ಲಿ ಒಂದಾದ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ಸನ್ನಿಧಿ ಪಾತ್ರ ನಿಭಾಯಿಸುವ ಮೂಲಕ ಕನ್ನಡಿಗರ ಮನೆ ಮನ ಗೆದ್ದಿದ್ದವರು ವೈಷ್ಣವಿ ಗೌಡ. ಆನಂತರ ಬಿಗ್ ಬಾಸ್ ಶೋನಲ್ಲಿ ಸ್ಪರ್ದಿಯಾಗಿ ವೈಷ್ಣವಿ ಸ್ಪರ್ದಿಸಿದ್ದರು,. ಇದೀಗ ವೈಷ್ಣವಿಗೆ ಕಂಕಣ ಬಾಗ್ಯ ಕೂಡಿ ಬಂದಿದೆ! ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದು ಹುಡುಗನೊಬ್ಬನ ಜೊತೆ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.. ಹಾಗಾದ್ರೆ ವೈಷ್ಣವಿ ಜೊತೆ ನಿಂತಿರುವ ಹುಡುಗ ಯಾರು ಅಂತೀರಾ? ಮುಂದೆ ಓದಿ
ಅಂದಹಾಗೆ ವೈಷ್ಣವಿ ಗೌಡ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವವರ ಹೆಸರು ವಿದ್ಯಾ ಭರಣ್ ಅಂತ.. ವಿದ್ಯಾ ಭರಣ್ ಮತ್ತು ವೈಷ್ಣವಿ ಇಬ್ಬರೂ ಮಾಲೆ ಹಾಕಿಕೊಂಡು ನಿಂತಿರುವ ಫೋಟೋ ಈಗ ಎಲ್ಲಾ ಕಡೆ ಹರಿದಾಡುತ್ತಿದೆ. ಸದ್ಯ ವೈರಲ್ ಆಗಿರುವ ವೈಷ್ಣವಿ ಎಂಗೇಜ್ಮೆಂಟ್ ಫೋಟೋದಲ್ಲಿ ಶಂಕರ್ ಬಿದಿರಿ ಕೂಡ ಇದ್ದಾರೆ. ವೈಷ್ಣವಿ ಮತ್ತು ವಿದ್ಯಾ ಭರಣ್ ಜೋಡಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಹುಡುಗ ಯಾರು?
ವೈಷ್ಣವಿ ಜೊತೆ ಸಾಂಸಾರಿಕ ಜೀವನಕ್ಕೆ ಕಾಲಿಡಲಿರುವ ಹುಡುಗ ವಿದ್ಯಾ ಭರಣ್. ಈಗಾಗಲೇ ವಿರಾಜ್ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾದಲ್ಲಿ ವಿದ್ಯಾ ಭರಣ್ ನಾಯಕನಾಗಿ ನಟಿಸಿದ್ದರು. ಬೆಂಗಳೂರು ಮೂಲದ ವಿದ್ಯಾ ಭರಣ್ ಬಿಎಮ್ಎಸ್ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ನಟನಾಗಿ ಸಕ್ರಿಯರಾಗಿದ್ದಾರೆ.. ಇದೀಗ ವೈಷ್ಣವಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
