ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉಪೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಸದ್ಯ ಈ ಕುರಿತು ಸ್ವತಃ ಉಪೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಫೇಸ್ಬುಕ್ ಲೈವ್ ಬಂದು ಮಾತನಾಡಿರುವ ಉಪೇಂದ್ರ ಅವರು, ಸದ್ಯ ನಾನು ಸ್ಟುಡಿಯೋದಲ್ಲಿಯೇ ಇದ್ದೇನೆ. ಎಲ್ಲಾ ಇಲ್ಲಿಯೇ ಇದ್ದಾರೆ ನೋಡಿ, ನಮ್ಮ ಡೈರೆಕ್ಷನ್ ವಿಭಾಗದವರು ಸೇರಿದಂತೆ ಎಲ್ಲರೂ ಇಲ್ಲಿಯೇ ಇದ್ದೇವೆ. ನಾನು ಆರೋಗ್ಯವಾಗಿ ಇದ್ದೇನೆ, ಏನು ತೊಂದರೆ ಆಗಿಲ್ಲ. ಸ್ವಲ್ಪ ಡಸ್ಟ್ ಜಾಸ್ತಿ ಇತ್ತು ಕೆಮ್ಮಿದೆ ಅಷ್ಟೇ. ಅದೇ ಏನೆನೋ ಸುದ್ದಿಯಾಗಿದೆ. ದಯವಿಟ್ಟು ಅನ್ಯತಾ ಸುದ್ದಿಗಳನ್ನು ಹಬ್ಬಿಸಬೇಡಿ. ಸದ್ಯ ನಾವು ಶೂಟಿಂಗ್ ಮುಂದುವರೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ವೈರಲ್ ಆಗಿತ್ತು. ಉಪೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬೆಂಗಳೂರಿನ ನೆಲಮಂಗಳ ಬಳಿ ಇರುವ ಹರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿತ್ತು. ಆದರೀಗ ಉಪೇಂದ್ರ ಅವರೆ ಸ್ಪಷ್ಟನೆ ನೀಡುವ ಮೂಲಕ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡರು. ಆತಂಕದಲ್ಲಿದ್ದ ಅಭಿಮಾನಿಗಳಿಗೆ ರಿಯಲ್ ಸ್ಟಾರ್ ಮಾತು ಕೇಳಿ ನಿಟ್ಟುಸಿರು ಬಿಟ್ಟಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
