fbpx
ಸಮಾಚಾರ

‘ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ’! ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ಎಸೆದ ರೈತ!

ಜಾತ್ರೆಯ ಸಮಯದಲ್ಲಿ ನಾವು ಹಲವು ಬಾರಿ ಗಮನಿಸಿದ್ದೇವೆ. ಅದೇನೆಂದರೆ ಬಾಳೆಹಣ್ಣಿನ ಮೇಲೆ ತಮ್ಮ ಆಸೆಗಳನ್ನು ಬರೆದು ಅದನ್ನು ರತದ ಮೇಲೆ ಎಸೆಯುತ್ತಾರೆ. ಇದರಲ್ಲಿ ಜನರು ತಮ್ಮ ಸ್ವಾರ್ಥಕ್ಕಾಗಿ ಏನು ಬೇಕು ಅದನ್ನು ಬರೆಯುವುದನ್ನು ನಾವು ಹೆಚ್ಚಾಗಿ ಗಮನಿಸಿದ್ದೇವೆ. ಆದರೆ ಆದರೆ ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ ಎಂದು ರಥದ ಮೇಲೆ ಬಾಳೆಹ್ಣು ಎಸೆದಿರುವ ಪ್ರಸಂಗ ನಡೆದಿದೆ.

ನಮ್ಮ ದೇಶದಲ್ಲಿ ಇರುವ ಒಂದು ದೊಡ್ಡ ಸಮಸ್ಯೆ ಎಂದರೆ ಅದು ರೈತರಿಗೆ ಹೆಣ್ಣು ಕೊಡುವುದಿಲ್ಲ ಎಂದು. ಹೌದು ಇತ್ತೀಚಿನ ದಿನಗಳಲ್ಲಿ ಹೆಣ್ಣು ಕೊಡಬೇಕು ಎಂದರೆ ಕೊನೆಪಕ್ಷ ಹುಡುಗ ಯಾವುದಾದರು ಒಂದು ಕೆಲಸದಲ್ಲಿ ಇರಬೇಕು. ಇಲ್ಲವಾದರೆ ಹೆಣ್ಣು ಕೊಡುವುದಿಲ್ಲ ಎಂದು ಹೇಳುವ ಮಾತುಗಳನ್ನು ನಾವು ಹಲವು ಬಾರಿ ಕೇಳಿದ್ದೇವೆ. ಬಹುಸಂಖ್ಯಾ ಹೆಣ್ಣೆತ್ತವರ ಮನಸ್ಸು ಬದಲಾಗಲಿ ರೈತರಿಗೆ ಕನ್ಯಾಕೊಡಲಿ ಎಂದು ತಾಯಿ ದುರ್ಗಾ ಮಾತೆಗೆ ರೈತರು ನಮನ ಸಲ್ಲಿಸಿದ್ದಾರೆ.

ಜನರ ಮನಸ್ಸು ಬದಲಾಗಲಿ ರೈತರಿಗೆ ಕನ್ಯಾ ಕೊಡಲಿ ಎಂಬ ಬರಹದ ಬಾಳೆಹಣ್ಣನ್ನು ರೈತರ ಪರವಾಗಿ ಸಮರ್ಪಣೆ ಮಾಡಿದ ಯುವಕ, ತಾಯಿ ದುರ್ಗಾಂಬಿಕೆ ಜನರ ಮನಸ್ಸು ಬದಲಾಯಿಸಿ ರೈತರಿಗೆ ಕನ್ಯೆ ಕೊಡುವಂತ ಮನಸ್ಥಿತಿ ಪ್ರತಿಯೊಬ್ಬರಿಗೂ ಕರುಣಿಸಲಿ ಎಂದು ಹಾರೈಕೆ ಮಾಡಿಕೊಂಡಿದ್ದಾನೆ. ಈ ಮೂಲಕನಾದರೂ ಇನ್ನು ಮುಂದೆ ಹೆಣ್ಣು ಹೆತ್ತವರು ರೈತರಿಗೆ ತಮ್ಮ ಮಕ್ಕಳನ್ನು ಕೊಟ್ಟು ಮದುವೆ ಮಾಡುತ್ತಾರಾ ಎಂದು ಕಾದು ನೋಡಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top