ಇತ್ತೀಚಿನ ದಿನಗಳಲ್ಲಿ ವೈದ್ಯರ ನಿರ್ಲಕ್ಷದಿಂದ ಹಲವಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿರುವ ಪ್ರಸಂಗವನ್ನು ಕೇಳುತ್ತಿರುತ್ತೇವೆ. ಇದರಲ್ಲಿ ಕೆಲವು ಕಿರುತೆರೆ ಕಲಾವಿದರು ಕೂಡ ಇದ್ದರು. ಇದೀಗ ಇಂತದ್ದೇ ಒಂದು ಪ್ರಸಂಗ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದ ಜ್ಯೂನಿಯರ್ ಆರ್ಟಿಸ್ಟ್ ಸಾವನ್ನಪ್ಪಿದ್ದಾರೆ.
ಈ ಬಾಲಕಿಯ ಹೆಸರು ಸಿಂಚನ(15). ಎಸ್ಎಸ್ಎಲ್ಸಿ ಓದಿದ್ದ ಇವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇದರ ಜೊತೆಗೆ ದಿನದ ಲೆಕ್ಕದಲ್ಲಿ ಕೆಲವು ಸಿನಿಮಾಗಳಲ್ಲಿ ಜ್ಯೂನಿಯರ್ ಡ್ಯಾನ್ಸರ್, ಸಹಕಲಾವಿದೆ ಆಗಿ ಕೆಲಸ ಮಾಡಿದ್ದಳು. ಆದರೆ ಇದ್ದಕ್ಕಿದಂತೆ ಇವರಿಗೆ ನೆನ್ನೆ ಆರೋಗ್ಯದಲ್ಲಿ ಏರುಪೇರಾಗಿ ವಾಂತಿ, ಭೇದಿ ಕಾಣಿಸಿಕೊಂಡಿದೆ.
ಹೀಗಾಗಿ ಇವರನ್ನು ಬೆಂಗಳೂರಿನ ಎಸ್.ಕೆ.ಹೆಲ್ತ್ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಸಿಂಚನ ಮೃತಪಟ್ಟಿದ್ದಾರೆ. ಇದೀಗ ಕುಟುಂಬಸ್ಥರು ಸಿಂಚನ ಸಾವಿಗೆ ಆಸ್ಪತ್ರೆಯ ವೈದ್ಯರೇ ಕಾರಣವೆಂದು ಆರೋಪ ಮಾಡುತ್ತಿದ್ದಾರೆ. ಆದರೆ ಮತ್ತೊಂದು ಕಡೆ ವೈದ್ಯರು ಸಿಂಚನ ಆಸ್ಪತ್ರೆಗೆ ದಾಖಲಾಗುವಾಗಲೇ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಇದೀಗ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
