ಅಮೆರಿಕದ ಶಾರ್ಟ್ ಸೆಲ್ಲಿಂಗ್ ಕಂಪನಿ ಹಿಂಡೆನ್ ಬರ್ಗ್ ಇತ್ತೀಚೆಗೆ ಅದಾನಿ ಗ್ರೂಪ್ ವಿರುದ್ಧ ಸಂಚಲನ ಸೃಷ್ಟಿಸುವಂತ ಆರೋಪ ಮಾಡಿದ್ದು ಗೊತ್ತೇ ಇದೆ. ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ಗಂಭೀರ ಕುತಂತ್ರಗಳನ್ನು ನಡೆಸುತ್ತಿದೆ ಮತ್ತು ಲೆಕ್ಕಪತ್ರ ವಂಚನೆಗಳನ್ನು ಮಾಡುತ್ತಿದೆ ಎಂದು ವರದಿಯನ್ನು ಬಿಡುಗಡೆ ಮಾಡಿತ್ತು. ಇದರಿಂದಾಗಿ ಭಾರೀ ಮಾರಾಟದ ಒತ್ತಡದ ನಡುವೆ ಅದಾನಿ ಸಮೂಹದ ಷೇರುಗಳ ಮೌಲ್ಯ ಕುಸಿದವು. ಸದ್ಯ ಅದಾನಿಯವರ ವೈಯಕ್ತಿಕ ಸಂಪತ್ತು ಅರ್ಧಕ್ಕಿಂತ ಹೆಚ್ಚು ನಷ್ಟವಾಗಿದೆ.. ಈ ಹಗರಣದ ತನಿಖೆ ನಡೆಸುವಂತೆ ವಿರೋಧ ಪಕ್ಷಗಳು ಸರ್ಕಾರದ ಮೇಲೆ ಹಾಗೂ ಸಂಸತ್ತಿನಲ್ಲಿ ಸಾಕಷ್ಟು ಒತ್ತಡ ಹೇರುತ್ತಿವೆ.
ಈ ಮಧ್ಯೆ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಅದಾನಿ ಕುರಿತು ತೀವ್ರ ಟೀಕೆ ಮಾಡಿದ್ದಾರೆ. ಅದಾನಿ ಸಮೂಹದ ಎಲ್ಲಾ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು ಮತ್ತು ಹರಾಜು ಮಾಡಬೇಕು. ಬಂದ ಹಣವನ್ನು ಕಳೆದುಕೊಂಡವರ ನೆರವಿಗೆ ನೀಡಬೇಕು. ಅದಾನಿ ಜತೆ ಯಾವುದೇ ಒಪ್ಪಂದಗಳಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ ನನಗೆ ಕಾಂಗ್ರೆಸ್ ಬಗ್ಗೆ ಕಾಳಜಿ ಇಲ್ಲ. ಬಿಜೆಪಿ ತನ್ನ ಪಾವಿತ್ರ್ಯವನ್ನು ಸಾಬೀತುಪಡಿಸಲು ಬಯಸುತ್ತದೆಯೇ? ಪ್ರಧಾನಿ ಮೋದಿ ಏನೋ ಮುಚ್ಚಿಡುತ್ತಿದ್ದಾರೆ ಎಂಬ ಭಾವನೆ ಜನರಲ್ಲಿದೆ. ಅದನ್ನು ಸ್ಪಷ್ಟಪಡಿಸುವುದು ಸರ್ಕಾರದ ಜವಾಬ್ದಾರಿ,’’ ಎಂದು ಸುಬ್ರಹ್ಮಣ್ಯಸ್ವಾಮಿ ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
