ನಮ್ಮ ಹೀರೋಗಳು ತೆರೆಮೇಲೆ ಮಾತ್ರವಲ್ಲ.. ತೆರೆಯ ಹಿಂದೆಯೂ ತಾವೇ ನಿಜವಾದ ಹೀರೋಗಳೆಂದು ಸಾಬೀತುಪಡಿಸಿದ ನಿದರ್ಶನಗಳು ಸಾಕಷ್ಟಿವೆ. ಸಂಕಷ್ಟದಲ್ಲಿರುವ ಅಭಿಮಾನಿಗಳ ಇಷ್ಟಾರ್ಥಗಳನ್ನು ಈಡೇರಿಸುವ ಹೀರೋಗಳು ನಮ್ಮ ಕನ್ನಡ ಸೇರಿದಂತೆ ಪ್ರತಿಯೊಂದು ಇಂಡಸ್ಟ್ರಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕೂಡ ಕ್ಯಾನ್ಸರ್ ನಿಂದ ಬಳಲುತ್ತಿರುವ ತಮ್ಮ ಅಭಿಮಾನಿಗೆ ಶುಭಾಶಯ ಹೇಳಿ ಧೈರ್ಯ ತುಂಬಿ ಬಂದಿದ್ದಾರೆ.
ಮಣಿ ಕೌಶಲ್ ಎಂಬ ಬಾಲಕ ಕಳೆದ ಕೆಲವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾನೆ. ಅವರು ರಾಮ್ ಚರಣ್ ಅವರ ದೊಡ್ಡ ಅಭಿಮಾನಿ. ಕುಶಾಲ್ಗೆ ರಾಮ್ ಚರಣ್ರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಈಡೇರಿಸಿರುವ ರಾಮ್ ಚರಣ್, ಆಸ್ಪತ್ರೆಗೆ ತೆರಳಿ ಬಾಲಕನನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಆ ಮಗುವಿಗೆ ಧೈರ್ಯ ತುಂಬಿದರು.
ಅದೇನೇ ಇರಲಿ, ಕ್ಯಾನ್ಸರ್ ನಂತಹ ಖಾಯಿಲೆಯೊಂದಿಗೆ ಹೋರಾಡುತ್ತಿರುವ ತನ್ನ ಬಾಲಭಿಮಾನಿಯೊಂದಿಗೆ ಧೈರ್ಯ ತುಂಬಿದ ರಾಮ್ ಚರಣ್ ಅಭಿಮಾನಿಗಳು ಹಾಗೂ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಗುವಿನ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಭರವಸೆ ನೀಡಿದರು. ಮಣಿ ಕೌಶಲ್ ಅವರು ಪೂರ್ಣ ಆರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತಮ್ಮ ಬಾಲ ಅಭಿಮಾನಿಯನ್ನು ಭೇಟಿ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
