fbpx
ಸಮಾಚಾರ

ಕಾಂತಾರ ಸಿನಿಮಾ ತಂಡಕ್ಕೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್! ಏನದು ಗೊತ್ತಾ?

ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿನ ಸುತ್ತಾ ಹಲವಾರು ವಿವಾದಗಳು ಕೇಳಿಬರುತ್ತಿತ್ತು. ಇತ್ತೀಚಿಗೆ ಕೇರಳ ಹೈಕೋರ್ಟ್ ಈ ಹಾಡನ್ನು ಸಿನಿಮಾದಲ್ಲಿ ಬಳಸಬಾರದೆಂದು ಷರತ್ತನ್ನು ಸಹ ವಿಧಿಸಿತ್ತು. ಆದರೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ.

ಸುಪ್ರೀಂ ಕೋರ್ಟ್ ನೀಡಿರುವ ಆದೇಶವೇನು?
ಸಿನಿಮಾ ತಂಡದವರು ಹಾಡನ್ನು ಬಳಕೆ ಮಾಡಬಹುದು. ವಿಚಾರಣೆಗೆ ಹಾಜರಾದಾಗ ನಿರ್ದೇಶಕರು ಹಾಗೂ ನಿರ್ಮಾಪಕರನ್ನು ಪೊಲೀಸರು ಪ್ರಶ್ನೆ ಕೇಳಬಹುದೇ ಹೊರತು ಅರೆಸ್ಟ್ ಮಾಡುವಂತಿಲ್ಲ’ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

‘ಕಾಂತಾರ ತಂಡದವರು ಕೃತಿಚೌರ್ಯ ಮಾಡಿದ್ದಾರೆ ಎಂದು ಕೇರಳ ಹೈಕೋರ್ಟ್​​​ಗೆ ಅನಿಸಿದೆ. ಹಾಗೆಂದು ಈ ರೀತಿಯ ನಿಯಮಗಳನ್ನು ಹೇರಲು ಸಾಧ್ಯವಿಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಫೆಬ್ರವರಿ 12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಯಾವುದೇ ರೀತಿಯ ಸಾಕ್ಷ್ಯ ನಾಶಮಾಡಬಾರದು ಮತ್ತು ಬೇರೆ ದೇಶಕ್ಕೆ ತೆರಳಬಾರದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top