fbpx
ಸಮಾಚಾರ

ಜೈಲು ಸೇರುವ ಭೀತಿ: ನಟಿ ಅಭಿನಯಗೆ ತಾತ್ಕಾಲಿಕ ರಿಲೀಫ್… ಆದರೆ?

ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ಚಿತ್ರನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್​ ಜೈಲು ಶಿಕ್ಷೆ ವಿಧಿಸಿದ್ದ ಸೆಷನ್​​​ ಕೋರ್ಟ್​, ತೀರ್ಪು ಎತ್ತಿ ಹಿಡಿದಿತ್ತು, ನಟಿ ಅಭಿನಯ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಅಭಿನಯ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು, ತಾಯಿ ಜಯಮ್ಮ, ಸಹೋದರ ಚಲುವರಾಜ್​ಗೂ ಜಾಮೀನು ಮಂಜೂರು ಮಾಡಲಾಗಿದ್ದು, ಷರತ್ತು ಬದ್ದ ಜಾಮೀನು ನೀಡಿದೆ.

ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ, ತಲೆಮರೆಸಿಕೊಂಡ ಆರೋಪದಡಿ ಅಭಿನಯಾ, ತಾಯಿ ಜಯಮ್ಮ ಹಾಗೂ ಅವರ ಸಹೋದರ ಚೆಲುವರಾಜು ವಿರುದ್ಧ ಬೆಂಗಳೂರಿನ ಚಂದ್ರಾ ಲೇಔಟ್‌ ಪೊಲೀಸರು ಲುಕ್‌ಔಟ್‌ ನೋಟಿಸ್‌ ಹೊರಡಿಸಿದ್ದರು.

ಮುಂದಿನ 10 ದಿನಗಳ ಮಟ್ಟಿಗೆ ಅವರನ್ನು ಬಂಧಿಸದಂತೆ ಸೂಚನೆ ನೀಡಿದೆ. ಜೊತೆಗೆ, ಬೆಂಗಳೂರು ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಫೆಬ್ರವರಿ 20ನೇ ತಾರೀಕು ವಿಚಾರಣೆ ನಡೆಯಲಿದ್ದು, ಅಂದಿನ ವಿಚಾರಣೆ ಅಭಿನಯ ಅವರ ಪಾಲಿಗೆ ನಿರ್ಣಾಯಕವಾಗಲಿದೆ. ಸದ್ಯಕ್ಕೆ ನಟಿ ಅಭಿನಯಾಗೆ 10 ದಿನದ ರಿಲೀಫ್ ಸಿಕ್ಕಿದೆ.

ಏನಿದು ಕೇಸ್:
ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿದ ಶಿಕ್ಷೆ ಪ್ರಕಟಿಸಿತ್ತು. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿತ್ತು.

2002ರಲ್ಲಿ ಲಕ್ಷ್ಮೀದೇವಿ ಅವರು ಅಭಿನಯಾ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ ವರಕ್ಷಿಣೆ ಪಡೆದಿದ್ದಲ್ಲದೆ, ನಂತರವೂ ಪದೇಪದೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು.ಹೆರಿಗೆಗೆ ಎಂದು ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನ ಮನೆಗೆ ವಾಪಸ್ಸು ಕರೆತರಲಿಲ್ಲ. ನಂತರ ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಆಕೆಯ ಪಾಲಕರಿಗೆ ಅವಮಾನ ಮಾಡಿದ್ದರು” ಎಂದು ಆರೋಪ ಮಾಡಿದ್ದರು.

ಈ ವಿಚಾರವಾಗಿ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾಲೇಔಟ್ ಠಾಣೆಗೆ ಲಕ್ಷ್ಮೀದೇವಿ ದೂರು ದಾಖಲಿಸಿದ್ದರು. ಚಂದ್ರಾಲೇಔಟ್ ಪೊಲೀಸರು ವಿಚಾರಣೆ ನಡೆಸಿ ಸಲ್ಲಿಸಿದ್ದ ಚಾರ್ಜ್​ಶೀಟ್​ ಆಧರಿಸಿ, ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ವಿಧಿಸಿತ್ತು.

ಆದರೆ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶದ ವಿರುದ್ಧ ಆರೋಪಿಗಳು ಜಿಲ್ಲಾ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಬಳಿಕ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top