ಕಾಂತಾರ ಸಿನಿಮಾದ ಯಶಸ್ಸು ರಿಷಬ್ ಶೆಟ್ಟಿ ಅವರನ್ನು ಬೇರೆ ಲೆವೆಲ್ ಗೆ ಕರೆದುಕೊಂಡು ಹೋಯಿತು ಎಂದು ಹೇಳಿದರೆ ತಪ್ಪಾಗಲಾರದು. ಕ್ಷಣಮಾತ್ರದಲ್ಲಿ ಪಾನ್ ಇಂಡಿಯಾ ಸ್ಟಾರ್ ಆದ ಇವರು ಇದೀಗ `ದಾದಾ ಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫೆಸ್ಟಿವಲ್ ಭರವಸೆಯ ನಟ’ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಫೆ.20ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಿದ್ದು, ಇದೀಗ ಇವರು ಡಿವೈನ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಈ ಕುರಿತು ಇವರು ಒಂದು ಪತ್ರ ಕೂಡ ಬರೆದಿದ್ದು, ಇದೀಗ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ.
ಈ ಪ್ರೀತಿ ಪುರಸ್ಕಾರಕ್ಕೆ ನಾನು ಸದಾ ಚಿರಋಣ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿರುವುದು ನನಗೆ ಇನ್ನಷ್ಟು ಸಿನಿಮಾ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸಿದೆ. ನನ್ನನ್ನು ನಂಬಿ ಅವಕಾಶ ಕೊಟ್ಟಿದ ಹೊಂಬಾಳೆ ಸಂಸ್ಥೆ ಮತ್ತು ವಿಜಯ್ ಕಿರಗಂದೂರು ಸರ್ ಅವರಿಗೆ ಋಣಿಯಾಗಿರುವೆ. ನಿಮ್ಮ ಜೊತೆ ಕೈ ಜೋಡಿಸಿ ಹೆಚ್ಚು ಸಿನಿಮಾ ಮಾಡಲು ಕಾಯುತ್ತಿರುವೆ. ಕಾಂತಾರ ಇಡೀ ತಂಡದಿಂದ ಇದು ಸಾಧ್ಯವಾಗಿದ್ದು ಹೀಗಾಗಿ ಕಲಾವಿದರು, ತಂತ್ರಜ್ಞರಿಗೆ ಪ್ರತಿಯೊಬ್ಬರಿಗೂ ಇದನ್ನು ಅರ್ಪಿಸುವೆ. ನನ್ನ ಪಿಲ್ಲರ್ ಆಫ್ ಲೈಫ್ ಪ್ರಗತಿ ಶೆಟ್ಟಿ ಕೂಡ ಎಂದಿದ್ದಾರೆ. ಈ ಪ್ರಶಸ್ತಿಯನ್ನು ದೈವ ನರ್ತಕರು, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸರ್, ಭಗವಾನ್ ಸರ್ಗೆ ಅರ್ಪಿಸುವೆ ಎಂದು ಬರೆದಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
