ಕಳೆದ ಕೆಲವು ದಿನಗಳಿಂದ ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬದವರಿಗೆ ಹಲವಾರು ಬೆದರಿಕೆ ಕರೆಗಳು ಬರುತ್ತಿದೆ. ಬಾಂಬ್ ಬೆದರಿಕೆ ಸೇರಿದಂತೆ ಹಲವು ಬೆದರಿಕೆ ಕರೆಗಳನ್ನು ಮುಂಬೈ ಹಾಗೂ ನಾಗ್ಪುರ ಪೊಲೀಸರು ಸ್ವೀಕರಿಸಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಒಂದು ಮಹತ್ವದ ಸೂಚನೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ಮುಕೇಶ್ ಅಂಬಾನಿ ಹಾಗೂ ಅಂಬಾನಿ ಕುಟುಂಬಕ್ಕೆ ಭಾರತದಲ್ಲಿರವು ಗರಿಷ್ಠ ಮಟ್ಟದ Z+ ಭದ್ರತೆ ನೀಡಲು ಸೂಚಿಸಿದೆ.
ಇದೀಗ ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಸಹ Z+ ಭದ್ರತೆ ನೀಡಲು ಸೂಚಿಸಿದೆ. ಸುಪ್ರೀಂಕೋರ್ಟ್ ಜಡ್ಜ್ ಗಳಾದ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ ಈ ಆದೇಶ ಮಾಡಿದೆ. ಅಲ್ಲದೆ ಸರ್ಕಾರ ನೀಡುವ ಈ ಭದ್ರತೆಯ ವೆಚ್ಚವನ್ನು ಅಂಬಾನಿಯವರೇ ಭರಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ.
ಕೇಂದ್ರ ಸರ್ಕಾರ ಗರಿಷ್ಠ ಭದ್ರತೆಯನ್ನು ಒದಗಿಸಿ ಅವರ ಸುರಕ್ಷತೆಯನ್ನು ಕಾಪಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿಂದೆ ಕೆಲವು ಹೈಕೋರ್ಟ್ ಆದೇಶದ ಮೇರೆಗೆ ಇವರಿಗೆ ಭದ್ರತೆ ನೀಡಲಾಗಿತ್ತು. ಆದರೆ ಆ ಭದ್ರತೆಯಲ್ಲಿ ಕೆಲವು ಗೊಂದಲ ವಾತಾವರಣ ಸೃಷ್ಟಿಯಾಗಿತ್ತು. ಇದೀಗ ಈ ತೊಂದರೆ ಬೇಡ ಎಂದು ಸುಪ್ರೀಂ ಕೋರ್ಟ್ Z+ ಭದ್ರತೆ ನೀಡಲು ಸೂಚಿಸಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
