ಮದುವೆಯಾಗಿ ಮಗುವಾದ ಬಳಿಕ ಸಂಜನಾ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ. ಮಗುವಿನ ಲಾಲನೆ ಪಾಲನೆಯಲ್ಲಿ ತೊಡಗಿದ್ದಾರೆ. ಇದೀಗ ಇವರಿಗೆ ಬೆದರಿಕೆ ಕರೆ ಬಂದಿರುವ ಕುರಿತು ದೂರನ್ನು ದಾಖಲಿಸಲು ಪೊಲೀಸ್ ಮೆಟ್ಟಿಲೇರಿದ್ದಾರೆ.
ಪಾರ್ಕಿಂಗ್ ವಿಚಾರವಾಗಿ ಸ್ಥಳೀಯ ನಿವಾಸಿಗಳ ಜೊತೆ ಗಲಾಟೆ ನಡೆದಿದ್ದು, ಕೊಲೆ ಮಾಡ್ತಿನಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ಸಂಜನಾ ಇಂದಿರಾನಗರ ಠಾಣೆಗೆ ದೂರು ನೀಡಿದ್ದಾರೆ. ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿ ಮನೆ ಬಳಿ ಯಶೋಧಮ್ಮ ಹಾಗೂ ರಾಜಣ್ಣ ಎಂಬುವವರ ಮನೆಯೂ ಇದೆ. ಇವರ ಮೇಲೆಯೇ ಸಂಜನಾ ದೂರು ನೀಡಿದ್ದಾರೆ.
ಸಂಜನಾ ಗಲ್ರಾನಿ “ಯಶೋಧಮ್ಮ ಹಾಗೂ ರಾಜಣ್ಣ ಎನ್ನುವವರು ರಸ್ತೆಗೆ ಅಡ್ಡಲಾಗಿ ಕಾರುಗಳನ್ನ ನಿಲ್ಲಿಸ್ತಾರಂತೆ. ಇದನ್ನ ಪ್ರಶ್ನೆ ಮಾಡಿದ್ರೆ ಕೊಲೆ ಮಾಡ್ತಿನಿ, ನಾವು ನಲವತ್ತು ವರ್ಷದಿಂದ ವಾಸ ಇದ್ದೀವಿ ಅಂತ ಆವಾಜ್ ಹಾಕಿದ್ದಲ್ಲದೆ, ವೇಶ್ಯೆ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ” ಎಂದು ಆರೋಪ ಮಾಡಿದ್ದಾರೆ. ಇದೀಗ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ FIR ಕೂಡ ದಾಖಲಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
