ಕಳೆದ ಕೆಲವದು ದಿನಗಳಿಂದ ರಾಜಕೀಯ ಅಖಾಡದಲ್ಲಿ ಒಂದು ಮಾತು ಹಲವು ಬಾರಿ ಕೇಳಿ ಬರುತ್ತಿತ್ತು. ಅದೇನೆಂದರೆ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ. ಆದರೆ ಈ ವಿಷಯ ನಿಜಾನಾ ಅಥವಾ ಸುಳ್ಳಾ ಎಂಬುದು ಇಲ್ಲಿಯವರೆಗೂ ಸ್ಪಷ್ಟವಾಗಿರಲಿಲ್ಲ. ಆದರೆ ಇದೀಗ ಈ ವಿಷಯದ ಕುರಿತು ಇಂದು ಮದ್ಯಾನ ಸ್ಪಷ್ಟನೆ ಸಿಗುವ ಎಲ್ಲಾ ಸಾಧ್ಯತೆಗಳಿವೆ.
ಇಂದು ಮಧ್ಯಾಹ್ನ 1.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಬರಮಾಡಿಕೊಳ್ಳಲು ಸರ್ವ ರೀತಿಯಲ್ಲೂ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಸುದೀಪ್ ಮಾತ್ರ ಯಾವುದೇ ಹೇಳಿಕೆ ನೀಡದೆ ಇದ್ದರು ಇವರ ಆಪ್ತರು ಮಾತ್ರ ಕಿಚ್ಚ ಸುದೀಪ್ ಬಿ.ಜೆ.ಪಿ ಸೇರುವುದು ಪಕ್ಕಾ ಎಂದು ಹೇಳುತ್ತಿದ್ದಾರೆ.
I strongly believe this is a Fake news spread by the desperate ,loosing BJP in Karnataka. @KicchaSudeep is far more sensible Citizen to fall prey ..ಕರ್ನಾಟಕದಲ್ಲಿ ಸೋಲುವ ಭಯದಲ್ಲಿ .. ಭ್ರಷ್ಟ BJP ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ .. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ #justasking https://t.co/kIRmFczTIO
— Prakash Raj (@prakashraaj) April 5, 2023
ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎಂಬ ಸುದ್ದಿ ಪ್ರಕಾಶ್ ರಾಜ್ ಅವರ ಕಿವಿಗೆ ಬಿದ್ದಿದ್ದು, ಟ್ವೀಟ್ ಮೂಲಕ ಅಚ್ಚರಿಯ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಹರಡುತ್ತಿರುವ ಸುಳ್ಳು ಸುದ್ದಿ ಇದು ಎಂದು ಹೇಳಿದ್ದಾರೆ. ಇದಲ್ಲದೆ “ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ” ಎಂದು ಟ್ವೀಟ್ ಮಾಡಿದ್ದಾರೆ. ಇದೀಗ ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
