ಕನ್ನಡ ಸಿನಿಮಾ ರಂಗದ ಹೆಸರಾಂತ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಇವರಿಗೆ ಅಪಾರವಾದ ಅಭಿಮಾನಿಬಳಗವಿದೆ. ಆದರೆ ಇದೀಗ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ. ಇದಲ್ಲದೆ ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ನಲ್ಲಿ ಬರೆದಿದ್ದಾರೆ. ಈ ಪತ್ರ ಸುದೀಪ್ ಮ್ಯಾನೇಜರ್ ಜಾಕ್ ಮಂಜು ಅವರಿಗೆ ಸಿಕ್ಕಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನನ್ವಯ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಹೀಗಾಗಿ ಈ ಪತ್ರ ಎಲ್ಲಿಂದ ಬಂದಿದೆ? ಇದನ್ನು ಬರೆದವರು ಯಾರು? ಇದರ ಹಿಂದಿನ ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
