ಸುದೀಪ್ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ವಿಚಾರ ಎಲ್ಲ ಕಡೆ ಹಬ್ಬುತ್ತಿತ್ತು. ಇದಲ್ಲದೆ ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ಮಾತು ಕೂಡ ಕೇಳಿಬರುತ್ತಿತ್ತು. ಈ ಕುರಿತು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. ಆದರೆ ಇದೀಗ ಸುದೀಪ್ ಬಿಜಿಪಿ ಪಕ್ಷ ಸೇರಿರುವುದು ಅವರಿಗೆ ಬೇಸರ ತಂದಿದೆ.
ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವಿಚಾರ ಹಬ್ಬುತ್ತಿದ್ದಂತೆ ಪ್ರಕಾಶ್ ರಾಜ್ ಒಂದು ಟ್ವೀಟ್ ಮಾಡಿದ್ದರು. ‘ಕರ್ನಾಟಕದಲ್ಲಿ ಹತಾಶರಾದ, ಸೋತ ಬಿಜೆಪಿಯಿಂದ ಹರಡಿದ ಸುಳ್ಳು ಸುದ್ದಿ ಇದು ಎಂದು ನಾನು ಬಲವಾಗಿ ನಂಬುತ್ತೇನೆ. ಕಿಚ್ಚ ಸುದೀಪ್ ಪ್ರಜ್ಞಾವಂತ ವ್ಯಕ್ತಿ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು.
ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಸುದ್ದಿಘೋಷ್ಠಿ ನಡೆಸಿದ ಸುದೀಪ್ ನಾನು ಬಿಜಿಪಿ ಪಕ್ಷಕ್ಕೆ ಬೆಂಬಲ ನೀಡುತ್ತೇನೆ ಆದರೆ ರಾಜಕೀಯಕ್ಕೆ ಪ್ರವೇಶ ಮಾಡುವುದಿಲ್ಲ ಎಂದು ಹೇಳಿದರು. ಇದಾದ ಬಳಿಕ ಪ್ರಕಾಶ್ ರಾಜ್ ಮತ್ತೊಮ್ಮೆ ತಮ್ಮ ಪ್ರತಿಕ್ರಿಯೆಯನ್ನು ತಿಳಿಸಿದ್ದರು.
‘ಸುದೀಪ್ ಹೇಳಿಕೆಯಿಂದ ನನಗೆ ಶಾಕ್ ಹಾಗೂ ಬೇಸರ ಆಗಿದೆ’ ಎಂದು ಅವರು ಹೇಳಿದ್ದಾರೆ. ಸುದೀಪ್ ಮತ್ತು ಪ್ರಕಾಶ್ ರಾಜ್ ಇಬ್ಬರು ಬಹಳ ವರ್ಷದಿಂದ ಆಪ್ತರು. ಆದರೆ ಪ್ರಕಾಶ್ ರಾಜ್ ಪ್ರತಿಯೊಂದು ಹಂತದಲ್ಲೂ ಸಹ ಬಿಜಿಪಿ ಮತ್ತು ನರೇಂದ್ರ ಮೋದಿ ಅವರ ನಡೆಯನ್ನು ಖಂಡಿಸುತ್ತಿದ್ದರು. ಇದೀಗ ಸುದೀಪ್ ಬಿಜೆಪಿ ಪರ ಪ್ರಚಾರಕ್ಕೆ ಇಳಿದಿರುವುದು ಇವರಿಗೆ ಬೇಸರ ತಂದಿದೆ. ಇದೀಗ ಪ್ರಕಾಶ್ ರಾಜ್ ಹೇಳಿಕೆಗೆ ಸುದೀಪ್ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
