ಕಿಚ್ಚ ಸುದೀಪ್ ಬಿಜಿಪಿ ಪರ ಪ್ರಚಾರಮಾಡುತ್ತಿರುವ ವಿಷಯ ನಮಗೆಲ್ಲ ಗೊತ್ತು. ಸ್ವತಃ ಸುದೀಪ್ ಅವರು ತಾವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ ಪ್ರಚಾರ ಮಾಡುವುದಾಗಿ ಹೇಳಿದರು. ಇನ್ನು ಕೆಲವೇ ದಿನಗಳಲ್ಲಿ ಅವರು ಬೊಮ್ಮಾಯಿ ಪರ ಪ್ರಚಾರ ಮಾಡಲಿದ್ದಾರೆ.
ಈ ಹಿಂದೆ ಸಿಎಂ ಬೊಮ್ಮಾಯಿ ಜೊತೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸುದೀಪ್, ನಾನು ಪಕ್ಷ ಸೇರ್ಪಡೆಯಾಗಿಲ್ಲ. ಆದ್ರೆ ಬಸವರಾಜ್ ಬೊಮ್ಮಾಯಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಆದರೆ ಬಿಜೆಪಿ ಮಾತ್ರ ಇನ್ನು ಎರಡು ಕ್ಷೇತ್ರದ ಟಿಕೆಟ್ ಹಾಗೆ ಉಳಿಸಿಕೊಂಡಿದೆ.
ಇತ್ತೀಚಿಗೆ ಬಂದಿರುವ ಮಾಹಿತಿಯ ಪ್ರಕಾರ ಬಿಜೆಪಿ ಕಿಚ್ಚ ಸುದೀಪ್ ಅವರಿಗೆ ಒಂದು ಆಫರ್ ನೀಡಿದ್ದಾರೆ. ಅವರೇನಾದರು ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರಿದರೆ ಇವೆರಡು ಕ್ಷೇತ್ರದಲ್ಲಿ ಒಂದು ಟಿಕೆಟ್ ಕೊಡುತ್ತೇವೆ ಎಂದು. ಆದರೆ ಕಿಚ್ಚ ಸುದೀಪ್ ಮಾತ್ರ ನಾನು ರಾಜಕೀಯಕ್ಕೆ ಇಳಿಯುವುದಿಲ್ಲ, ಆದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.
ಶಿವಮೊಗ್ಗ ಅಥವಾ ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಸುದೀಪ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ. ಆದರೆ ಸುದೀಪ್ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆನ್ನಲಾಗುತ್ತಿದೆ. ಹೀಗಾಗಿ ಒಂದು ವೇಳೆ ಕಿಚ್ಚ ಸುದೀಪ್ ತಾವು ಕಡಾಕಂಡಿತವಾಗಿ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಹೇಳಿದರೆ ಇವೆರಡು ಕ್ಷೇತ್ರದ ಟಿಕೆಟ್ ಬೇರೆಯವರ ಪಾಲಾಗುತ್ತದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
