fbpx
ಸಮಾಚಾರ

10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಸಿದ ಸ್ವತಂತ್ರ ಅಭ್ಯರ್ಥಿ! ಹಣ ಎನಿಸಿ ಸುಸ್ತಾದ ಅಧಿಕಾರಿಗಳು

ಕರ್ನಾಟಕದಲ್ಲಿ ಚುನಾವಣೆಯ ರಂಗು ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಹಣಇರುವವರು ತಮ್ಮ ಬಳಿ ಇರುವ ಆಸ್ತಿಯನ್ನು ಘೋಷಿಸಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಹಣ ಇಲ್ಲದೆ ಸ್ವತಂತ್ರ ಅಭ್ಯರ್ಥಿಯೊಬ್ಬರು ಭಿಕ್ಷೆ ಬೇಡಿ ಹಣ ಸಂಪಾದಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಸ್ವತಂತ್ರ ಅಭ್ಯರ್ಥಿಯಾಗಿರುವ ಯಂಕಪ್ಪ ತಮ್ಮ ಠೇವಣಿ ಹಣ 10,000 ರೂ.ಗಳನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳಲ್ಲಿ ಪಾವತಿಸಿದ್ದು, ಇದನ್ನು ಎಣಿಸಲು ಅಧಿಕಾರಿಗಳು ಸಂಪೂರ್ಣವಾಗಿ ಸುಸ್ತಾಗಿದ್ದಾರೆ.

ಯಂಕಪ್ಪ ಈ ರೀತಿ ಹಣ ಗಳಿಸಲು ಸುಮಾರು ಒಂದು ವರ್ಷಗಳ ಕಾಲ ಯಾದಗಿರಿ ವಿಧಾನಸಭಾ ಕ್ಷೇತ್ರದ 10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ, ಪ್ರತೀ ಮನೆಯಲ್ಲಿ ಒಂದು ರೂ.ಗಳಂತೆ ಹತ್ತು ಸಾವಿರ ಸಂಗ್ರಹಿಸಿದ್ದಾರೆ. ಈ ರೀತಿ ಭಿಕ್ಷೆ ಬೇಡುತ್ತಾ, ಗ್ರಾಮದ ದೇವಾಲಯದಲ್ಲಿ ರಾತ್ರಿಹೊತ್ತು ವಾಸ್ತವ್ಯ ಹೂಡುತ್ತಿದ್ದರು. ಇದಾದ ಬಳಿಕ ಊರಿನ ಮನೆಗಳಲ್ಲಿ ಭಿಕ್ಷೆ ಬೇಡಿ ಊಟವನ್ನೂ ಮಾಡುತ್ತಿದ್ದರು.

ಇವರು ತಮ್ಮ ಕೊರಳಿಗೆ ಜ್ಞಾನಜ್ಯೋತಿ ಬಸವೇಶ್ವರ, ಸಂತ ಕವಿ ಕನಕದಾಸ, ಸ್ವಾಮಿ ವಿವೇಕಾನಂದ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರಗಳು ಮತ್ತು ಸಂವಿಧಾನದ ಪೀಠಿಕೆ ಹಾಕಿಕೊಂಡು ಊರೂರು ಸುತ್ತಾಡಿ ಹಣ ಸಂಗ್ರಹಿಸಿದ್ದಾರೆ. ಇದಲ್ಲದೆ ಕೆಳಗಡೆ ಕನ್ನಡದಲ್ಲಿ ಕೇವಲ ಒಂದು ರೂಪಾಯಿ ಅಲ್ಲ, ನಿಮ್ಮ ಒಂದು ಮತ, ನೀವು ಒಂದು ದಿನ ನನಗೆ ಮತ ನೀಡಿ, ನಾನು ನಿಮಗೆ ಬಡತನದಿಂದ ಮುಕ್ತಿ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದು ಜನರನ್ನು ಮತ್ತಷ್ಟು ಆಕರ್ಷಿಸುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top