ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಪ್ರಶಾಂತ್ ಸಂಬರ್ಗಿ ಇದೀಗ ಯೂಟರ್ನ್ ಹೊಂಡೆದಿದ್ದಾರೆ. ಶಿವಣ್ಣ ದುಡ್ಡಿಗೋಸ್ಕರ ಪ್ರಚಾರ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಪ್ರಶಾಂತ್ ಸಂಭರ್ಗಿ ವಿರುದ್ಧ ಶಿವಣ್ಣನ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಕಷ್ಟು ವಿರೋಧ, ಟೀಕೆ ವ್ಯಕ್ತವಾದ ನಂತರ ಪ್ರಶಾಂತ್ ಸಂಬರ್ಗಿ ತಾವು ಆಡಿದ ಮಾತನ್ನು ಹಿಂದಕ್ಕೆ ಪಡೆದಿದ್ದಾರೆ.
ಪ್ರಶಾಂತ್ ಸಂಭರ್ಗಿ ಮೊದಲು ಹೇಳಿದ್ದು ಏನು?
‘ಶಿವಣ್ಣ ಯಾವಾಗಲೂ ಸ್ಕ್ರಿಪ್ಟ್ ಕೇಳಲ್ಲ. ಅವರಿಗೆ ಹಣ ಅಷ್ಟೇ ಮುಖ್ಯ. ಸಿನಿಮಾ ಫ್ಲಾಪ್ ಆದರೂ ಅವರು ಕೇಳುವುದಿಲ್ಲ. ಮತ್ತೆ ಹಣ ತೆಗೆದುಕೊಂಡು ಮತ್ತೊಂದು ಸಿನಿಮಾ ಸಹಿ ಮಾಡುತ್ತಾರೆ. ರಾಜಕೀಯದಲ್ಲೂ ಅವರದ್ದು ಅದೇ ಸೂತ್ರ. ಅಭ್ಯರ್ಥಿ ಗೆಲ್ಲಲಿ, ಬಿಡಲಿ ಹಣ ಬಂದ್ರೆ ಆಯ್ತು’ ಎಂದು ಪ್ರಶಾಂತ್ ಸಂಭರ್ಗಿ ಪೋಸ್ಟ್ ಮಾಡಿದ್ದರು.ಬಳಿಕ ಶಿವಣ್ಣ ಕೂಡ ರಿಯಾಕ್ಟ್ ಮಾಡಿದ್ದರು. ನಾನು ಇಲ್ಲಿ ಮನಸ್ಸಿನ ಮಾತು ಕೇಳಿ ಬಂದಿದ್ದೇನೆ. ಅವರು ಆ ರೀತಿ ಮಾತನಾಡೋದು ಸರಿಯಲ್ಲ ಎಂದಿದ್ದರು. ಅವರ ಮಾತು ಹಿಂಪಡೆಯಲಿ ಎಂದಿದ್ದರು. ಹಾಗಾಗಿ ಸಂಬರ್ಗಿ ತಾವು ಆಡಿದ ಮಾತನ್ನ ಹಿಂಪಡೆದಿದ್ದಾರೆ.
ಮಾತು ಹಿಂಪಡೆದ ಪ್ರಶಾಂತ್ ಸಂಬರ್ಗಿ
‘ಶಿವಣ್ಣ ಹಾಗೂ ಇನ್ನೋರ್ವ ನಮ್ಮ ಆಪ್ತಮಿತ್ರನೊಂದಿಗೆ ಈಗತಾನೇ ಮಾತನಾಡಿದೆ. ಶಿವಣ್ಣ ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ತಂದೆಯ ಬಯಕೆಯಂತೆ ಶಿವಣ್ಣ ಅವರು ರಾಜಕೀಯದಿಂದ ದೂರವಾಗಿದ್ದರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ. ಶಿವಣ್ಣ ಮತ್ತು ಅವರ ಅಭಿಮಾನಿಗಳು ಬೇಸರ ಮಾಡಿಕೊಳ್ಳಬಾರದು’ ಎಂದು ಪ್ರಶಾಂತ್ ಸಂಬರ್ಗಿ ಬರೆದುಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
