ಕರ್ನಾಟಕ ಸರ್ಕಾರದ ಲಾಂಛನದಲ್ಲಿ ಕನ್ನಡ ಲಿಪಿಯಲ್ಲಿ ಸಿರಿಗನ್ನಡಂ ಗೆಲ್ಗೆ ಸೇರಿಸಲು ರಾಜ್ಯಸಭಾ ಸದಸ್ಯರಾದ ಬಿಸಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಂಸದ ಚಂದ್ರಶೇಖರ್, “ದೇಶದ ಬಹುತೇಕ ರಾಜ್ಯಗಳಂತೆಯೇ ಕರ್ನಾಟಕ ಸರ್ಕಾರವೂ ವಿಶಿಷ್ಟ ಹಾಗೂ ಕರ್ನಾಟಕ ಸಂಸ್ಕೃತಿಯನ್ನು ಜಂಟಿಸುವ ಲಾಂಛನ ಹೊಂದಿದ್ದು, ಕರ್ನಾಟಕ ಸರ್ಕಾರದ ಲಾಂಛನವನ್ನು ಭಾರತದ ಲಾಂಛನದಲ್ಲಿರುವ ಅಶೋಕ ಸ್ಥಂಭದ ಭಾಗ ಮತ್ತು ಮೈಸೂರು ರಾಜ್ಯದ ಲಾಂಛನದ ಭಾಗವನ್ನು ಒಗ್ಗೂಡಿಸಿ ರೂಪಿಸಲಾಗಿದೆ. ನಂತರ ಸತ್ಯಮೇವ ಜಯತೆ ವಾಕ್ಯ ದೇವನಾಗರಿ ಲಿಪಿಯಲ್ಲಿ ಇದೆ’ ಎಂದು ಅವರು ಹೇಳಿದ್ದಾರೆ.
“ನಮ್ಮ ಈ ಕರ್ನಾಟಕ ಸರ್ಕಾರದ ಲಾಂಛನದಲ್ಲಿ ಕನ್ನಡ ಲಿಪಿ ಎಲ್ಲಯೂ ಕೂಡ ಉಪಯೋಗಿಸಿಲ್ಲ. ಅದೇ ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ಲಾಂಛನಗಳಲ್ಲಿ ಅವರ ರಾಜ್ಯ ಭಾಷೆಗಳ ಉಪಯೋಗ ಮಾಡಿದ್ದಾರೆ. ಇದೇ ರೀತಿ ಕರ್ನಾಟಕ ಸರ್ಕಾರದ ಲಾಂಛನದಲ್ಲೂ ಕನ್ನಡ ಲಿಪಿಯು ಇರಬೇಕು ಎಂದು ವಿವಿಧ ಕನ್ನಡ ಪರ ಹೋರಾಟಗಾರರು, ವಿದ್ಯಾರ್ಥಿಗಳು ಹಾಗು ಸಂಘಟನೆಗಳ ಮನವಿಯಾಗಿದೆ”
“ಕನ್ನಡ ಅಪಿಯಲ್ಲಿ “ಸಿಲಿಗನ್ನಡಂ ಗೆಲ್ಲೆ’ ಎಂದು ಉಪಯೋಗಿಸುವುದು ಸೂಕ್ತ ಎಂಬುದು ನನ್ನ ಅನಿಸಿಕೆಯಾಗಿದೆ. ಕನ್ನಡ ಪ್ರೇಮಿಯಾಗಿರುವ ನೀವು ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ತಜ್ಞರ ಸಮಿತಿ ರಚಿಸಿ ಇದಕ್ಕೆ ಸೂಕ್ತ ಲೀತಿಯಲ್ಲಿ ಈ ಮನವಿಗೆ ಪರಿಹಾರ ನೀಡುತ್ತಿರಿ ಎಂದು ಆಶಿಸುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
