fbpx
ಸಮಾಚಾರ

ಬಾಡಿಗೆ ಮನೆಗಳಿಗೂ ಉಚಿತ ವಿದ್ಯುತ್‌: ಗೊಂದಲಕ್ಕೆ ತೆರೆ ಎಳೆದ ಸಿಎಂ ಸಿದ್ದು

ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯಡಿ ಬಾಡಿಗೆ ಮನೆಗಳಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 40ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅರಸ್ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡಿದರು.

ಈ ವೇಳೆ ಮಾತನಾಡಿದ ಅವರು ” 200 ಯೂನಿಟ್ ಒಳಗೆ ವಿದ್ಯುತ್ ಬಳಸುವವರಿಗೆ ಉಚಿತ ವಿದ್ಯುತ್ ಸಿಗುತ್ತದೆ, ಬಾಡಿಗೆ ಮನೆಯಲ್ಲಿರುವವರಿಗೂ ಉಚಿತ ವಿದ್ಯುತ್ ನೀಡುತ್ತೇವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಅಂಗಡಿಗಳಂತೆ ವಾಣಿಜ್ಯ ಬಳಕೆಗೆ ಉಚಿತ ವಿದ್ಯುತ್ ಯೋಜನೆ ಅನ್ವಯಿಸುವುದಿಲ್ಲ” ಎಂದು ಹೇಳಿದರು.

ನಿಯಮಗಳು ಅನ್ವಯ: ಸಚಿವ ಜಾರ್ಜ್
ಇಂಧನ ಸಚಿವ ಕೆ.ಜೆ.ಜಾರ್ಜ್ ಬಾಡಿಗೆ ಮನೆಗಳಿಗೆ ಕೆಲವು ನಿಯಮಗಳನ್ನು ಪ್ರಕಟಿಸಿದ್ದಾರೆ. ಮನೆಯ ಮಾಲೀಕರು ಆಸ್ತಿ ತೆರಿಗೆ ಪಾವತಿಸಿರಬೇಕು. ತಪ್ಪಾಗಿ ಮಾಹಿತಿ ನೀಡಿದರೆ ಯೋಜನೆ ಅನ್ವಯವಾಗುವುದಿಲ್ಲ ಎಂದರು.

ಪಡೆಯುವುದು ಹೇಗೆ?
* ಬಾಡಿಗೆ, ಭೋಗ್ಯದ ಕರಾರು, ಇತರೆ ದಾಖಲೆಗಳನ್ನು ಬಾಡಿಗೆದಾರ ಸಲ್ಲಿಕೆ ಮಾಡಬೇಕು
* ಬಾಡಿಗೆಗೆ ಇರುವ ಮನೆಯ ವಿದ್ಯುತ್‌ ಮೀಟರ್‌ನ ಆರ್‌ಆರ್‌ ನಂಬರ್‌ ಜತೆಗೆ ಸಲ್ಲಿಸಬೇಕು
* ಮನೆ ಮಾಲೀಕ ಕೂಡ ತಾನು ಎಷ್ಟುಮನೆ ಬಾಡಿಗೆ ಕೊಟ್ಟಿದ್ದೇನೆ ಎಂದು ಘೋಷಿಸಬೇಕು
* ಎಲ್ಲ ಮನೆಗಳಿಗೂ ಮಾಲೀಕ ಕಡ್ಡಾಯವಾಗಿ ಆಸ್ತಿ ತೆರಿಗೆಯನ್ನು ಪಾವತಿ ಮಾಡಿರಬೇಕು
*ಇವೆಲ್ಲವೂ ನಿಯಮಬದ್ಧವಾಗಿದ್ದರೆ ಬಾಡಿಗೆದಾರನ ಮನೆಗೂ ಉಚಿತ ವಿದ್ಯುತ್‌ ಸೌಲಭ್ಯ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top