fbpx
ಸಮಾಚಾರ

3 MLC ಸ್ಥಾನಗಳಿಗೆ ಉಪಚುನಾವಣೆ

ಶಾಸಕರ ಕೋಟಾದ 3 ವಿಧಾನ ಪರಿಷತ್ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮಂಗಳವಾರದಿಂದ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಎಂಎಲ್ಸಿಗಳಾದ ಬಾಬುರಾವ್ ಚಿಂಚನೂರು, ಆರ್.ಶಂಕರ್ ಮತ್ತು ಲಕ್ಷ್ಮಣ ಸವದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, 3 ಸ್ಥಾನಗಳು ಖಾಲಿ ಉಳಿದಿವೆ. ಜೂನ್ 23ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಅವಿರೋಧವಾದರೆ ಜೂನ್ 30ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.

ಮೂವರೂ ಕಾಂಗ್ರೆಸ್‌ಗೆ?
ಆಡಳಿತ ಪಕ್ಷ ಕಾಂಗ್ರೆಸ್ 135 ಶಾಸಕರನ್ನು ಹೊಂದಿದೆ. 3 ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು. ಈ ಉಪಚುನಾವಣೆಯಿಂದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ದೂರ ಉಳಿಯುವ ಸಾಧ್ಯತೆ ಇದೆ. ಸ್ಪರ್ಧಿಸಿದರೆ, ಮತದಾನದ ಅಗತ್ಯವಿರಬಹುದು. ಮತ್ತೊಂದೆಡೆ, ಕಾಂಗ್ರೆಸ್‌ನ ನಾಯಕರು ಎಂಎಲ್‌ಸಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top