fbpx
ಸಮಾಚಾರ

ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಧಾಂದಲೆ; ಕನ್ನಡ ಕಿರುತೆರೆಯ ಖ್ಯಾತ ನಟನ ವಿರುದ್ಧ ಎಫ್ಐಆರ್ ದಾಖಲು

ಬಾರ್ನಲ್ಲಿ ಕಂಠಪೂರ್ತಿ ಕು ಕುಡಿದ ಮತ್ತಿನಲ್ಲಿ ಕನ್ನಡ ಕಿರುತೆರೆಯ ಖ್ಯಾತ ನಟ ಬಾರ್ನಲ್ಲಿ ದಾಂದಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ… ಗಲಾಟೆಯ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.

ಈ ರೀತಿ ಎಣ್ಣೆ ಏಟಿನಲ್ಲಿ ಗಲಾಟೆ ಮಾಡಿಕೊಂಡಿರುವ ನಟನ ಹೆಸರು ಪ್ರಜ್ವಲ್. ಈತ ಸದ್ಯ ಉದಯ ಟಿವಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಣ್ಣ ತಂಗಿ ಎಂಬ ಧಾರಾವಾಹಿಯಲ್ಲಿ ಇಂದ್ರನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಪ್ರಜ್ವಲ್ ಅವರು ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಮೃತವರ್ಷಿಣಿ ಧಾರಾವಾಹಿ ಎಲ್ಲೂ ಕೂಡ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದರು.

ಪ್ರಜ್ವಲ್ ಅವರು ತಮ್ಮ ಗೆಳೆಯರ ಜೊತೆ ರಾಜರಾಜೇಶ್ವರಿ ನಗರದಲ್ಲಿರುವ ಅಮೃತ ಬಾರ್ ಅಂಡ್ ರೆಸ್ಟೋರೆಂಟ್ ಎಂಬ ಬಾರಿಗೆ ತೆರಳಿದ್ದಾರೆ. ಬಾರ್ ನಲ್ಲಿ ಸ್ನೇಹಿತರೊಟ್ಟಿಗೆ ಮಧ್ಯಪಾನ ಮಾಡುವ ವೇಳೆ ಪಕ್ಕದಲ್ಲಿ ಇದ್ದ ಚೇತನ್ ಎಂಬುವವರ ಜೊತೆಗೆ ಸಣ್ಣ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಸಣ್ಣ ವಿಚಾರ ದೊಡ್ಡದಾಗಿ ಪರಿಣಮಿಸಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

ನಂತರ ಪ್ರಜ್ವಲ್ ಅವರು ಚೇತನ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಚೇತನ್ ಅವರು ರಾಜರಾಜೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚೇತನ್ ಅವರ ದೂರಿನ ಆಧಾರದ ಮೇಲೆ ಪ್ರಜ್ವಲ್ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top