fbpx
ಸಮಾಚಾರ

ಸುದೀಪ್, ದರ್ಶನ್ ಸಂಧಾನದ ಬಗ್ಗೆ ಸುಮಲತಾ ಪ್ರತಿಕ್ರಿಯೆ

ಇತ್ತೀಚಿಗೆ ನಡೆದಿದ್ದ ಸಂಸದೆ ಸುಮಲತಾ ಅಂಬರೀಷ್ ಅವರ ಬರ್ತಡೇ ಪಾರ್ಟಿಯಲ್ಲಿ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಅವರು ಕಾಣಿಸಿಕೊಂಡಿದ್ದು ಭಾರಿ ಸುದ್ದಿಗೆ ಗ್ರಾಸವಾಗಿತ್ತು. ಮೊದಲೆಲ್ಲಾ ಆತ್ಮೀಯ ಸ್ನೇಹಿತರು ಎಂದು ಕರೆಸಿಕೊಳ್ಳುತ್ತಿದ್ದ ಈ ಇಬ್ಬರ ಸ್ನೇಹದ ನಡುವೆ ಕಳೆದ ಆರು ವರ್ಷಗಳಿಂದ ಕಂದಕ ಏರ್ಪಟ್ಟಿತ್ತು. ಈ ಆರು ವರ್ಷಗಳಲ್ಲಿ ಯಾವ ವೇದಿಕೆ ಸಮಾರಂಭಗಳಲ್ಲೂ ಸುದೀಪ್ ಮತ್ತು ದರ್ಶನ್ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದೀಗ ಸುಮಲತಾ ಬರ್ತಡೇ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳಲ್ಲಿ ಒಂಥರಾ ಖುಷಿ ತಂದಿದೆ.

ಸುದೀಪ್ ಮತ್ತು ದರ್ಶನ್ ಪಾರ್ಟಿಯಲ್ಲಿ ಭಾಗಿಯಾಗಿದ್ದರ ಬಗ್ಗೆ ಸ್ವತಃ ಸುಮಲತಾ ಅಂಬರೀಷ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಇದು ನಮ್ಮ ವೈಯಕ್ತಿಕ ಬದುಕಿನ ಕಾರ್ಯಕ್ರಮವಾಗಿತ್ತು.. ಒಂದು ಫ್ಯಾಮಿಲಿ ಅಂದ ಮೇಲೆ ಎಲ್ಲರೂ ಒಂದೇನೆ. ಅವರು ಬೇರೇ ರೀತಿಯಲ್ಲಿ ಇರೋಲ್ಲ. ನಾವೆಲ್ಲರೂ ಒಂದೇ ಕುಟುಂಬದವರು ಅನ್ನೋ ಹಾಗೆ ಇರುತ್ತಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡೋಕೆ ಇಷ್ಟಪಡಲ್ಲ, ಇದು ತೀರಾ ಪರ್ಸನಲ್‌ ವಿಚಾರ ಎಂದು ಸುಮಲತಾ ಮಾತನಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top