fbpx
ಸಮಾಚಾರ

ಸಚಿನ್ ತೆಂಡೂಲ್ಕರ್ ಮನೆಯ ಮುಂದೆ ಶಾಸಕರಿಂದ ಪ್ರತಿಭಟನೆ! ಕಾರಣವೇನು ಗೊತ್ತಾ?

ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಮನೆ ಮುಂದೆ ಪ್ರಹಾರ್ ಜನಶಕ್ತಿ ಪಕ್ಷದ ಶಾಸಕ ಬಚೂ ಕಾಡು ತಮ್ಮ ಅನುಯಾಯಿಗಳೊಂದಿಗೆ ಗುರುವಾರ ಪ್ರತಿಭಟನೆ ನಡೆಸಿದರು.

ತೆಂಡೂಲ್ಕರ್ ಅವರು ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತೆಂಡೂಲ್ಕರ್ ಭಾರತ ರತ್ನವನ್ನು ಹಿಂದಿರುಗಿಸಬೇಕೆಂದು ಒತ್ತಾಯಿಸಿದರು. ಸಚಿನ್ ನಟಿಸಿರುವ ಜಾಹೀರಾತು ಯುವಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ, ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಸಚಿನ್ ತೆಂಡೂಲ್ಕರ್ ಆನ್‌ಲೈನ್ ಆಟಗಳನ್ನು ಪ್ರಚಾರ ಮಾಡಿರುವುದು ಶಾಸಕ ಬಚ್ಚು ಕಡು ಅಸಮಾಧಾನಕ್ಕೆ ಕಾರಣವಾಗಿದೆ. ಆನ್‌ಲೈನ್ ಗೇಮ್ಸ್ ಜಾಹೀರಾತುಗಳಿಂದ ಹಿಂದೆ ಸರಿಯದಿದ್ದರೆ ಪ್ರತಿ ಗಣೇಶ ಮಂಟಪದ ಮುಂದೆ ಧರಣಿ ನಡೆಸುವುದಾಗಿ ಹೇಳಿದ್ದಾರೆ. ಬಳಿಕ ಪೊಲೀಸರು ಶಾಸಕರನ್ನು ತಮ್ಮ ಹಿಂಬಾಲಕರೊಂದಿಗೆ ಅಲ್ಲಿಂದ ಸ್ಥಳಾಂತರಿಸಿದರು. ಬಚೂ ಕಾಡು ಸೇರಿ 22 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top