ಉತ್ತರಾಖಂಡ್ ರಾಜ್ಯದಲ್ಲಿ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಗಮನದಲ್ಲಿಟ್ಟುಕೊಂಡು, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಉತ್ತರಾಖಂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಕೋಟಿ ರೂ ನೀಡಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ದೇಶಕ ಅನಂತ್ ಅಂಬಾನಿ ಪರವಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಯನಿರ್ವಾಹಕ ಸಹಾಯಕ ತನಯ್ ದ್ವಿವೇದಿ ಪರಿಹಾರ ನಿಧಿಗೆ ಮೊತ್ತವನ್ನು ಹಸ್ತಾಂತರಿಸಿದರು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಅನಂತ್ ಅಂಬಾನಿಗೆ ಧನ್ಯವಾದ ತಿಳಿಸಿದ್ದಾರೆ.
ಅಂದಹಾಗೆ ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಹಾಗೂ ಪ್ರವಾಹ ಉಂಟಾಗಿದೆ. ಈ ಹಿಂದೆ ಅಧಿಕೃತ ಅಂದಾಜಿನ ಪ್ರಕಾರ ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 52 ಜನರು ಸಾವನ್ನಪ್ಪಿದ್ದಾರೆ. 37 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಹಲವು ಕಡೆ ಸಂಪರ್ಕ ರಸ್ತೆಗಳು ಕೊಚ್ಚಿ ಹೋಗಿವೆ. ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು SDRF ತಂಡಗಳನ್ನು ಜಿಯೋಂಡ್ಲೋದಲ್ಲಿ ನಿಯೋಜಿಸಲಾಗಿದೆ. ರಾಜ್ಯದ ಹಲವೆಡೆ ನೀರಿನ ಕೊರತೆ ಇದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
