fbpx
ಸಮಾಚಾರ

ಗಣೇಶ ಹಬ್ಬಕ್ಕೆ ಊರಿಗೆ ಹೋಗ್ಬೇಕು ಅಂತಾ ಪ್ಲಾನ್ ಮಾಡ್ಕೊಂಡಿದ್ದೀರಾ? ಹಾಗಾದ್ರೆ KSRTC ಕೊಟ್ಟಿರೋ ಈ ಗುಡ್ ನ್ಯೂಸ್ ಓದಿ.

ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ಬೆಂಗಳೂರಿನಿಂದ ಹೊರಡುವ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹಾಗಂತ ಬಸ್ ಟಿಕೆಟ್ ಏನಾದ್ರೂ ಕಮ್ಮಿ ಮಾಡಿದ್ದಾರಾ? ಎಂದು ಭಾವಿಸಿಕೊಂಡರೆ ಅದು ನಿಮ್ಮ ತಪ್ಪು ಭಾವನೆಯಾಗುತ್ತೆ. ಯಾಕಂದ್ರೆ ಟಿಕೆಟ್ ಬೆಲೆನೇ ಏನೂ ಕಮ್ಮಿ ಮಾಡಿಲ್ಲ, ಆದರೆ ಅನುಕೂಲವಾಗುಂತೆ 1,200 ಬಸ್‍ಗಳ ಹೆಚ್ಚುವರಿ ಸೇವೆ ನೀಡಲು ಮುಂದಾಗಿದೆ.

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸೆ. 16, 17ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ನಾನಾ ಪ್ರದೇಶಗಳಿಗೆ ಹೆಚ್ಚುವರಿಯಾಗಿ 1200ಕ್ಕೂ ಅಧಿಕ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ.

ಬೇಡಿಕೆಗೆ ಅನುಗುಣವಾಗಿ ನಗರ ಪ್ರಮುಖ ಸ್ಥಳಗಳಾದ ವಿಜಯನಗರ, ಬನಶಂಕರಿ, ಜಾಲಹಳ್ಳಿ ಕ್ರಾಸ್, ಬಸವೇಶ್ವರ ನಿಲ್ದಾಣ, ಜಯನಗರ 4ನೇ ಬ್ಲಾಕ್, ಕೆಂಗೇರಿ ಉಪನಗರ ಬಸ್ ನಿಲ್ದಾಣಗಳಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರತಿಷ್ಠಿತ ಬಸ್‌ಗಳನ್ನು ಶಾಂತಿನಗರದಲ್ಲಿನ ಡಿಪೊ 2 ಮತ್ತು 3ರ ಮುಂಭಾಗದಿಂದ ಬಿಡಲಾಗುತ್ತದೆ. ಹಾಗೆಯೇ ಸೆ. 19ರಂದು ರಾಜ್ಯ ಮತ್ತು ಹೊರರಾಜ್ಯದ ನಾನಾ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top